Politics

*ಸಿಎಂ ಸಿದ್ದರಾಮಯ್ಯ ಕುಟುಂಬದಲ್ಲಿ ನಡೆದ ವಿಚಾರ ದಾಖಲೆ ಸಮೇತ ಹೊರತರುತ್ತೇನೆ ಎಂದ ಮಾಜಿ ಸಿಎಂ HDK*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಇದೇ ವಿಚಾರವಗಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಮಹಾನ್ ನಾಯಕರ ಕೈವಾಡವಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ನಡೆದಿದ್ದ ಘಟನೆ ಬಗ್ಗೆ ಪ್ರಧಾನಿ ಮೋದಿ ಮಾಡಿದ ಸಹಾಯವನ್ನು ಮರೆತಂತಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂದಲ್ಲಿ ನಡೆದ ಘಟನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಲ್ಲಾ ದಾಖಲೆಗಳನ್ನು ನಾವು ಹೊರಗೆ ತರುತ್ತೇವೆ. ನಿಮ್ಮ ಕುಟುಬದಲ್ಲಿ ಏನಾಯಿತು ಎಂಬುದು ಎಲ್ಲವೂ ಹೊರಗೆ ಬರುತ್ತದೆ ಎಂದು ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ನಮ್ಮ ವಿರುದ್ಧ ಯಾಕೆ ಪ್ರತಿಭಟನೆ ಮಡುತ್ತಿದ್ದಾರೆ? ಇಂತಹ ವಿಡಿಯೋವನ್ನು ಹೊರತಂದು ಮಹಿಳೆಯರ ಗೌರವವನ್ನು ಹಾಳು ಮಾಡುತ್ತಿರುವುದು ಅವರು ಹಾಗಾಗಿ ಅವರ ವಿರುದ್ಧ ಪ್ರತಿಭಟನೆ ಮಾಡಬೇಕು. ಪೆನ್ ಡ್ರೈವ್ ಹಿಂದಿರುವ ಕೈ ನಾಯಕರ ವಿರುದ್ಧ ಪ್ರತಿಭಟಿಸಬೇಕು ಎಂದು ಹೇಳಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button