ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಬೆಳಗಾವಿಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಖಾನಾಪುರ ರಸ್ತೆಯ ಉದಯ ಭವನದ ರಾಮ ಕೇಶವ ಲಾಡ್ಜ್ ನಲ್ಲಿ ಆರ್.ಎಸ್.ಎಸ್ ವತಿಯಿಂದ ನೂತನವಾಗಿ ನಿರ್ಮಿಸಲಾದ ಜನಸೇವಾ ಕೋವಿಡ್ ಕೇರ್ ಸೆಂಟರ್ ಅನ್ನು ಇಂದು ಉದ್ಘಾಟಿಸಲಾಯಿತು.
ಇಸ್ಕಾನ್ ನ ನಾಗೇಂದ್ರ ಸ್ವಾಮೀಜಿ ಕೋವಿಡ್ ಸೆಂಟರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಸಾಬಣ್ಣ ತಳವಾರ ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು.