Karnataka NewsLatestPolitics
*ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ನಿರೀಕ್ಷಣಾ ಜಾಮೀನು ವಾಪಾಸ್ ಪಡೆದ ರೆವಣ್ಣ*

ಪ್ರಗತಿವಾಹಿನಿ ಸುದ್ದಿ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಬಂಧಿಸಿದಂತೆ ಮಾಜಿ ಸಚಿವ, ಶಾಸಕ ಹೆಚ್.ಡಿ,ರೇವಣ್ಣ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.
ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಹೆಚ್.ಡಿ.ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ಎಸ್ ಐಟಿ ಎಸ್ ಪಿಪಿ ಬ್ಯಾತ ಎನ್.ಜಗದೀಶ್ ಹೆಚ್.ಡಿ.ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಸೇರಿಸಿಲ್ಲ. ಹಾಗಾಗಿ ನಿರೀಕ್ಷಣಾ ಜಾಮೀನು ಅಗತ್ಯವಿಲ್ಲ. ಅವರ ವಿರುದ್ಧ ಈವರೆಗೆ ಜಾಮೀನು ನೀಡಬಹುದಾದ ಆರೋಪಗಳು ಮಾತ್ರ ಇವೆ ಎಂದು ತಿಳಿಸಿದ್ದಾರೆ.
ಎಸ್ ಐಟಿ ಕೋರ್ಟ್ ಗೆ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದಿದ್ದಾರೆ.



