Kannada NewsKarnataka NewsLatest

*ನಿರೀಕ್ಷಣಾ ಜಾಮೀನು ನಿರೀಕ್ಷೆಯಲ್ಲಿದ್ದ ರೇವಣ್ಣಗೆ ಶಾಕ್*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲಿದ್ದ ಶಾಸಕ ಹೆಚ್.ಡಿ.ರೇವಣ್ಣಗೆ ಕೋರ್ಟ್ ಶಾಕ್ ನೀಡಿದೆ.

ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣ ಅಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಸೆಷನ್ಸ್ ಕೋರ್ಟ್, ನಿರೀಕ್ಷಣಾ ಜಾಮೀನಿಗೆ ಸೂಕ್ತ ವಿವರ ನೀಡುವಂತೆ ಸೂಚಿಸಿ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ.

ಇಂದು ರೇವಣ್ಣ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ನಿಟ್ಟಿನಲ್ಲಿ ರೇವಣ್ಣಗೆ ಬಂಧನ ಭೀತಿ ಶುರುವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button