Politics

*ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ರಾ ಹೆಚ್.ಎಂ.ರೇವಣ್ಣ?*

ಪ್ರಗತಿವಾಹಿನಿ ಸುದ್ದಿ: ಗ್ಯಾರಂಟಿ ಯೋಜನೆಗಳ ಅನಿಷ್ಠಾನ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವವರ ಮೇಲೆ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಆರ ಮಾಡಿರುವ ನಂದಿನಿ ನಾಗರಾಜ್, ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಮಾತುಕತೆ ನಡೆಯುತ್ತಿದ್ದ ವೇಳೆ ನಂದಿನಿ ನಾಗರಾಜ್ ವಿಡಿಯೋ ಮಾಡಲು ಮುಂದಾಗಿದ್ದರು. ಇದಕ್ಕೆ ಹೆಚ್.ಎಂ.ರೇವಣ್ಣ ಆಕ್ಷೇಪ ವ್ಯಕ್ತಾಡಿಸಿದ್ದಾರೆ. ವಿಡಿಯೋ ಮಾಡಬೇಡ ಇಲ್ಲಿಂದ ಹೋಗು ಎಂದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Home add -Advt

ಆದರೆ ಈ ಬಗ್ಗೆ ಪ್ರತಿಕ್ರಿಸಿರುವ ಹೆಚ್.ಎಂ.ರೇವಣ್ಣ, ನಾನು ಈವರೆಗೂ ಆಕೆಯನ್ನು ನೋಡಿಯೇ ಇಲ್ಲ. ನಿನ್ನೆಯೇ ನೋಡಿದ್ದು, ಕಾಂಗ್ರೆಸ್ ಕಾರ್ಯಕರ್ತೆ ಎಂದು ಹೇಳಿಕೊಳ್ಳುತ್ತಿದ್ದಾಳೆ. ಸಭೆ ನಡೆಯುತ್ತಿದ್ದಾಗ ವಿಡಿಯೋ ಮಾಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಹಲ್ಲೆ ಎಂದು ಆರೋಪಿಸುತ್ತಿದ್ದಾರೆ ಎಂದಿದ್ದಾರೆ.


Related Articles

Back to top button