Politics

*ಹೆಚ್.ಎಂ.ರೇವಣ್ಣ ವಿರುದ್ಧ ಸಿಎಂಗೆ ದೂರು ನೀಡಿದ ಕೈ ಕಾರ್ಯಕರ್ತೆ*

ಪ್ರಗತಿವಾಹಿನಿ ಸುದ್ದಿ: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್, ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

Home add -Advt

ಜಾತಿ ನಿಂದನೆ ಮಡಿ, ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹೆಚ್.ಎಂ.ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಹೆಚ್.ಎಂ.ರೇವಣ್ಣ ವಿರುದ್ಧ ಡಿಜಿ &ಐಜಿಪಿ, ಸಮಾಜಕಲ್ಯಾಣ ಇಲಾಖೆಗೂ ದೂರು ನೀಡಿದ್ದಾಗಿ ತಿಳಿಸಿದ್ದಾರೆ. ಹೆಚ್,ಎಂ.ರೇವಣ್ಣ ಜಾತಿನಿಂದನೆ ಮಾಡಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವ ಕ್ರಮ ಕೈಗೊಂಡಿಲ್ಲ ಎಂದು ನಂದಿನಿ ದೂರಿನಲ್ಲಿ ತಿಳಿಸಿದ್ದಾರೆ.

ಹೆಚ್.ಎಂ.ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತನಗೆ ರಕ್ಷಣೆ ನೀಡುವಂತೆ ನಂದಿನಿ ನಾಗರಾಜ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Related Articles

Back to top button