Latest

ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗಬಾರದು: ಹೆಚ್.ವಿಶ್ವನಾಥ್ ಕಳಕಳಿ!

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಎಂಎಲ್ ಸಿ ಹೆಚ್.ವಿಶ್ವನಾಥ್ ಇದೀಗ ಕಿಕ್ ಬ್ಯಾಕ್ ಪಡೆದ ಆರೋಪ ಮಾಡಿದ್ದಾರೆ. ನಿರಾವರಿ ಯೋಜನೆಯಲ್ಲಿ ಭಾರಿ ಅಕ್ರಮ ವೆಸಗಲಾಗಿದ್ದು, 20 ಸಾವಿರ ಕೋಟಿ ರೂ ಯೋಜನೆಯಲ್ಲಿ ಗುತ್ತಿಗೆದಾರರಿಂದಲೇ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಭದ್ರಾ ಮೇಲ್ದಂಡೆ ನಿರಾವರಿ ಯೋಜನೆ ಕಾಮಗಾರಿಗಾಗಿ 20 ಸಾವಿರ ಕೋಟಿ ರೂಪಾಯಿ ಟೆಂಡರ್ ತರಾತುರಿಯಲ್ಲಿ ಕರೆಯಲಾಗಿದೆ. ಏನೋ ಕೆಲಸ ಮಾಡಿದಂತೆ ತೋರಿಸಲು ಹೀಗೆ ಬಂದು ಕಿಕ್ ಬ್ಯಾಕ್ ಪಡೆದು ಹೋಗುತ್ತಿದ್ದಾರೆ. ಕಾವೇರಿ ನೀರಾವರಿ ನಿಗಮದಲ್ಲೂ ಅಕ್ರಮ ನಡೆದಿದೆ. ಈ ಎಲ್ಲದರಲ್ಲೂ ವಿಜಯೇಂದ್ರ ಹಸ್ತಕ್ಷೇಪವಿದೆ. ಪ್ರತಿಯೊಂದು ಇಲಾಖೆಯಲ್ಲಿಯೂ ವಿಜಯೇಂದ್ರ ಹಸ್ತಕ್ಷೇಪವಿದ್ದು, ಹಣ ಪಡೆದು ಹೋಗುತ್ತಿರುವ ಬಗ್ಗೆ ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಬಿ.ಎಸ್.ಯಡಿಯೂರಪ್ಪ ಈ ಮೊದಲು ಮಕ್ಕಳಿಂದಾಗಿಯೇ ಜೈಲಿಗೆ ಹೋಗಿದ್ದರು. ಮತ್ತೆ 2ನೇ ಬಾರಿಗೆ ಯಡಿಯೂರಪ್ಪ ಜೈಲಿಗೆ ಹೋಗಬಾರದು ಎಂಬ ಕಾರಣಕ್ಕಾಗಿ ಇದನ್ನು ಹೇಳುತ್ತಿದ್ದೇವೆ. ವಿಜಯೇಂದ್ರ ವಿರುದ್ಧ ಇಡಿಯಲ್ಲಿ ಪ್ರಕರಣ ದಾಖಲಾಗಿದೆ ಅದೇ ಕಾರಣದಿಂದಾಗಿಯೇ ಪದೇ ಪಡೆ ದೆಹಲಿಗೆ ಹೋಗುತ್ತಿದ್ದಾರೆ. ಈ ಅಕ್ರಮಗಳ ಬಗ್ಗೆ ಸಮರ್ಪಕ ತನಿಖೆ ನಡೆಯಲಿ ಎಂದು ಆಗ್ರಹಿಸಿದರು.
ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ; ಸ್ವಾಮೀಜಿ ಒತ್ತಡ

Home add -Advt

Related Articles

Back to top button