Politics

*ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಅವರ ನಿಧನಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಅವರ ನಿಧನಕ್ಕೆ ಡಿಸಿಎಂ ಡಿ. ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

“ಪ್ರತಿಭಾವಂತ ನೃತ್ಯ ಕಲಾವಿದೆಯಾಗಿದ್ದ ಹಂಸ ಮೊಯ್ಲಿ ಅವರು ಅತ್ಯಂತ ಚಿಕ್ಕ ವಯಸ್ಸಿಗೆ ನಮ್ಮನ್ನು ಅಗಲಿರುವುದು ಅತ್ಯಂತ ನೋವಿನ ಸಂಗತಿ.

Home add -Advt

ತಂದೆಯವರಂತೆ ಹಂಸ ಅವರು ಸಹ ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಕಲೆಯ ಎಲ್ಲಾ ಆಯಾಮಗಳು ತಲುಪಬೇಕು ಎಂದು ಕನಸು ಕಂಡವರು. ಸಮ ಸಮಾಜದ ಕನಸು ಕಾಣುತ್ತಿದ್ದ ಹಾಗೂ ಜನಪರವಾದ ಆಶಯಗಳನ್ನು ಹೊಂದಿದ್ದ ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು.

46 ವರ್ಷದ ಹಂಸ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂಬುದನ್ನು ಹಿತೈಷಿಗಳು ಹೇಳಿದ್ದರು. ಆದಷ್ಟು ಬೇಗ ಗುಣಮುಖರಾಗಿ ಬರುತ್ತಾರೆ ಎನ್ನುವ ಭರವಸೆ ಈಗ ಇಲ್ಲವಾಗಿದೆ.

ಬೆಳೆದ ಮಕ್ಕಳನ್ನು ಕಣ್ಣ ಮುಂದೆಯೇ ಕಳೆದುಕೊಳ್ಳುವುದು ಅತ್ಯಂತ ನೋವಿನ ಸಂಗತಿ. ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಅವರಿಗೆ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ವಿಯೋಗವನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ದೇವರು ಕರುಣಿಸಲಿ. ಹಂಸ ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button