Latest

ಹಂಸಲೇಖಾ ಜೊತೆ ನಾನೂ ಠಾಣೆಗೆ ಬರುತ್ತೇನೆ ಎಂದ ನಟ ಚೇತನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾದಬ್ರಹ್ಮ ಹಂಸಲೇಖಾ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಡುವೆ ಹಂಸಲೇಖಾ ಜೊತೆ ನಾನೂ ಪೊಲೀಸ್ ಠಾಣೆಗೆ ಬರುತ್ತೇನೆ ಎಂದು ನಟ ಚೇತನ್ ಪೋಸ್ಟ್ ಮಾಡಿದ್ದು, ಭಜರಂಗದಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡಿರುವ ಭಜರಂಗದಳ ಕಾರ್ಯಕರ್ತರು ಹಂಸಲೇಖಾ ಜೊತೆ ಠಾಣೆಗೆ ನಟ ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ. ಇನ್ನೊಂದೆಡೆ ಹಂಸಲೇಖಾ ಬೆಂಬಲಿಗರು ಠಾಣೆಯ ಮುಂದೆ ಜಮಾವಣೆಗೊಂಡಿದ್ದು, ಹಂಸಲೇಖಾ ಪರವಾಗಿ ಘೋಷಣೆ ಕೂಗುತ್ತಿದ್ದಾರೆ.

ಒಟ್ಟಾರೆ ಹಂಸಲೇಖಾ ವಿಚಾರಣೆಗೆ ಹಾಜರಾಗುತ್ತಿರುವ ಬೆನಲ್ಲೇ ನಾನೂ ಹಂಸಲೇಖಾ ಜೊತೆ ಠಾಣೆಗೆ ಬರುತ್ತೇನೆ ಎಂದು ಹೇಳುವ ಮೂಲಕ ನಟ ಚೇತನ್ ಅನಗತ್ಯ ಗೊಂದಲ ಸೃಷ್ಟಿಸಿದ್ದು, ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button