Latest

*ಪೂಜ್ಯ ಹಾನಗಲ್ ಶ್ರೀ ಕುಮಾರಸ್ವಾಮಿ ಚಲನಚಿತ್ರ ಟ್ರೈಲರ್ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪೂಜ್ಯ ಹಾನಗಲ್ ಶ್ರೀ ಕುಮಾರಸ್ವಾಮಿ ಅವರ ಜೀವನಾದರ್ಶಗಳನ್ನು ಸಾರುವ ಚಲನಚಿತ್ರ ಈಗಿನ ಸಮಾಜ ಹಾಗೂ ಯುವಪೀಳಿಗೆಗೆ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿ ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ ಚಿತ್ರದ ಧ್ವನಿ ಸುರುಳಿ, ಟ್ರೈಲರ್ ನ್ನು ಅವರು ಇಂದು ಬಿಡುಗಡೆ ಮಾಡಿ ಮಾತನಾಡಿದರು.

ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿಹಿಡಿದ ಮಹಾನ್ ಯೋಗಿ :
ಪೂಜ್ಯ ಹಾನಗಲ್ ಶ್ರೀ ಕುಮಾರ್ ಶಿವಯೋಗಿಗಳು ಮಹಾನ್ ಸಾಧಕರು. ಹಾನಗಲ್ ಕುಮಾರಸ್ವಾಮಿಗಳು 12 ನೇ ಶತಮಾನದ ಸಾಮಾಜಿಕ ಕ್ರಾಂತಿ ತೆರೆಗೆ ಸರಿಯುತ್ತಿರುವ ಸಂದರ್ಭದಲ್ಲಿ ಹಾನಗಲ್ ಕುಮಾರಸ್ವಾಮಿಯವರು ಹೊಸ ರೂಪ ಕೊಟ್ಟರು.ವೀರಶೈವ ಲಿಂಗಾಯತ ಸಮಾಜವನ್ನು ಎತ್ತಿಹಿಡಿದ ಮಹಾನ್ ಯೋಗಿ. ಅವರು ಸ್ಥಾಪನೆ ಮಾಡಿರುವ ಶಿವಯೋಗಿ ಮಂದಿರ ಇಂದಿಗೂ ಕೂಡ ಎಲ್ಲ ಅಧ್ಯಾತ್ಮಿಕ ಚಿಂತನೆಯನ್ನು ಮಾಡುವ ಸಂಸ್ಥೆಯಾಗಿದೆ. ವ್ಯವಸ್ಥಿತವಾದ ಇಂತಹ ಸಂಸ್ಥೆ ಬೇರೆಲ್ಲೂ ಕಾಣಲು ಸಿಗುವುದಿಲ್ಲ. ನಮ್ಮ ಪರಂಪರೆ, ಸಂಸ್ಕೃತಿ, ಸಂಸ್ಕಾರ ಗಳನ್ನು ಶಿವಯೋಗಿ ಮಂದಿರದ ಮೂಲಕ ಕಾಪಾಡಿಕೊಂಡು ಬರಲಾಗಿದೆ. ಇಂತಹ ಸಂಸ್ಥೆಯನ್ನು ಕಟ್ಟಿದ ಹಾನಗಲ್ ಕುಮಾರಸ್ವಾಮಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಚಲನಶೀಲ ಸಮಾಜ :
ಶಿವಯೋಗಿ ಮಂದಿರ ಜೀರ್ಣೊದ್ದಾರಕ್ಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಣ ನೀಡಿ ಜೀರ್ಣೊದ್ದಾರ ಮಾಡಿದ್ದಾರೆ. ವೀರಶೈವ ಲಿಂಗಾಯತ ಸಮಾಜ ಪ್ರಗತಿಪರವಾಗಿದ್ದು, ಈ ಸಮಾಜ ಕಾಲಕ್ಕೆ ತಕ್ಕಂತೆ ಎಲ್ಲವನ್ನು ಒಪ್ಪಿಕೊಳ್ಳುವ ಚಲನಶೀಲ ಸಮಾಜವಾಗಿದೆ. ಈ ಸಮಾಜ ಚಲನಶೀಲವಾಗಿರುವುದರಿಂದ ಈ ಸಮಾಜಕ್ಕೆ ಯಾವುದೇ ಧಕ್ಕೆ ಇಲ್ಲ. ಅವರು ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆ ಮಾಡಿದ ಪೂಜ್ಯ ಹಾನಗಲ್ ಕುಮಾರಸ್ವಾಮಿಯವರು, ಪ್ರಥಮ ಅಧ್ಯಕ್ಷರಾಗಿದ್ದರು‌ ಅವರು ಶಿಕ್ಷಣ ಸಂಸ್ಥೆಗಳನ್ನು ತೆರೆದು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕೆ ಅದ್ಯತೆ ನೀಡಿದರು‌.

ತ್ರಿವಿಧ ದಾಸೋಹದಲ್ಲಿ ತೊಡಗಿರುವ ಮಠ :
ಕರ್ನಾಟಕದಲ್ಲಿ ಶಿಕ್ಷಣ ಉತ್ತಮಗೊಳ್ಳುವಲ್ಲಿ ಮಠಮಾನ್ಯಗಳು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಕಾರಣವಾಗಿದೆ. ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸುವ ಮೂಲಕ ಸರ್ಕಾರ ಮಾಡುವ ಕೆಲಸವನ್ನು ಮಾಡಿದರು. ಬೆಳಗಾವಿಯ ನಿಪ್ಪಾಣಿಹಿಂದ ಕೊಳ್ಳೆಗಾಲದವರೆಗೆ ಬೀದರ್ ನಿಂದ ಕೊಳ್ಳೆಗಾಲದವರೆಗು ಎಲ್ಲ ಗ್ರಾಮಗಳಲ್ಲಿ ವೀರಶೈವ ಲಿಂಗಾಯತ ಮಠಗಳು ಅಧ್ಯಾತ್ಮದ ಜೊತೆಗೆ ತ್ರಿವಿಧ ದಾಸೋಹದಲ್ಲಿ ತೊಡಗಿಕೊಂಡಿವೆ ವಿಜಯ ಸಂಕೇಶ್ವರ್ ಅವರ ಜೀವನ ಚರಿತ್ರೆ ಚಿತ್ರ ಬಿಡುಗಡೆಯಾಗಿದೆ. ಯಶಸ್ಸು ನಮಗಾಗಿ ಅಲ್ಲ ಸಮಾಜಕ್ಕಾಗಿ ಪ್ರೇರಣೆಯಾಗಬೇಕೆಂದು ವಿಜಯ ಸಂಕೇಶ್ವರರು ತಿಳಿಸಿದ್ದನ್ನು ಸ್ಮರಿಸಿದರು.

ಈ ಸಮಾರಂಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೊರೆ, ಮಾಜಿ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಹಾಗೂ ಸ್ವಾಮೀಜಿಗಳು ಹಾಜರಿದ್ದರು.

*ಅವರ ಭಾವನೆ ನನಗೆ ಅರ್ಥವಾಗಿದೆ ಎಂದ ಸಿಎಂ*

 

https://pragati.taskdun.com/cm-basavaraj-bommaik-s-eshwarapparamesh-jarakiholireaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button