Latest

ಉಪಚುನಾವಣೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿದೆ. ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ.

ಅಕ್ಟೋಬರ್ 1 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ.

Home add -Advt

ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಹಿರಿಯ ನಾಯಕ ಸಿ.ಎಂ ಉದಾಸಿ ನಿಧನದಿಂದ ಹಾನಗಲ್ ಕ್ಷೇತ್ರ ತೆರವಾಗಿತ್ತು ಇನ್ನು ಜೆಡಿಎಸ್ ಹಿರಿಯ ಶಾಸಕ ಎಂ.ಸಿ ಮುನಗೋಳಿ ನಿಧನದಿಂದ ಸಿಂಧಗಿ ಕ್ಷೇತ್ರ ತೆರವಾಗಿತ್ತು.
ಒಂದುವರೆ ವರ್ಷದ ಬಳಿಕ ಬಾಗಿಲು ತೆರೆದ ಸವದತ್ತಿ ಯಲ್ಲಮ್ಮ ದೇವಾಲಯ

Related Articles

Back to top button