Belagavi NewsBelgaum NewsKannada NewsKarnataka News

ಹನುಮಾನ್ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಹನುಮಾನ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಸ್ಥರೆಲ್ಲ ಮುಂದಾಗಿ ಹನುಮಾನ್ ಗುಡಿ ಕಟ್ಟಬೇಕೆಂದು ನಿರ್ಧರಿಸಿದಾಗ ನನ್ನಿಂದ ಸಾಧ್ಯವಾದ ನೆರವು ನೀಡಿದೆ. ಅದಕ್ಕಿಂತ ಹೆಚ್ಚಾಗಿ ನೀವೆಲ್ಲ ಬಹಳಷ್ಟು ಶ್ರಮ ಪಟ್ಟು ಭಕ್ತಿಯಿಂದ ಈ ಮಂದಿರವನ್ನು ಸುಂದರವಾಗಿ ನಿರ್ಮಾಣ ಮಾಡಿದ್ದೀರಿ. ಗ್ರಾಮದಲ್ಲಿ ಅದ್ದೂರಿಯಿಂದ ನಡೆಯುತ್ತಿರುವ ಮಂದಿರದ ಉದ್ಘಾಟನೆಯ‌ ಕಾರ್ಯಕ್ರಮ​ ಮನಸ್ಸಿಗೆ ಖುಷಿ ತಂದಿದೆ. ​ ದೇವರ ಆಶಿರ್ವಾದ ನನಗೆ, ನಿಮಗೆ ಎಲ್ಲರಿಗೂ ಸಿಕ್ಕಿದೆ. ನಾನು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಇನ್ನಷ್ಟು ಒಳ್ಳೆಯದಾಗಲಿದೆ ಎಂದು ಹೇಳಿದರು.

Home add -Advt

ಗ್ರಾಮೀಣ ಕ್ಷೇತ್ರಾದ್ಯಂತ ನೂರಾರು ದೇವಸ್ಥಾನಗಳನ್ನು ಕಳೆದ 5 ವರ್ಷದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ದೇವರ ಹೆಸರಿನಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ, ದೇವರು, ಭಕ್ತಿ ಇವೆಲ್ಲ ನಮ್ಮ ಮನಸ್ಸಿನಲ್ಲಿದೆ. ಜನರು ನನ್ನ ಜೊತೆಗಿದ್ದಾರೆ, ದೇವರ ಆಶಿರ್ವಾದವಿದೆ. ಹಾಗಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಮಾಡಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡುವ ಶಕ್ತಿ ಕೊಡು ಎಂದು ಪ್ರಾರ್ಥಿಸೋಣ ಎಂದು ಅವರು ಹೇಳಿದರು.

​ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶೇಖರ್ ಹೊಸೂರಿ, ಕಲ್ಮೇಶ್ ಹೊಸೂರಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಬಸನಗೌಡ ಪಾಟೀಲ, ಲಕ್ಷ್ಮಣ ತಳವಾರ, ಸತ್ಯಪ್ಪ ನಂದ್ಯಾಗೋಳ, ಕಲ್ಲಪ್ಪ ಸುತಗಟ್ಟಿ, ಮಲ್ಲಪ್ಪ ಗೊಸಾವಿ, ವಿಲ್ಸನ್ ಮಹಾರ್, ಶಿವಾಜಿ ಮೊಕಾಶಿ, ಶಿವಾ ಪಾಟೀಲ, ಕಲ್ಲಪ್ಪ ಶಿನಗಿ, ಕಲ್ಮೇಶ್ ಮಳಗಳಿ, ಶ್ರೀಕಾಂತ ಶಿನಗಿ ಹಾಗೂ ಗ್ರಾಮಸ್ಥರು, ದೇವಸ್ಥಾನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button