Latest

*ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ; ಅಹಮದಾಬಾದ್: ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ವಿರುದ್ಧ ಸುರೇಂದ್ರನಗರ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.

2017ರ ಗುಜರಾತ್ ವಿಧಾನಸಭಾ ಚುನಾವಣೆಗೂ ಮೊದಲು ಗುಜರಾತ್ ನ ಧುರ್ತಾಪುರ್ ಗ್ರಾಮದಲ್ಲಿ ಸರ್ಕಾರದ ಆದೇಶ ಉಲ್ಲಂಘನೆ ಮಾಡಿ ರಾಜಕೀಯ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾರ್ದಿಕ್ ಪಟೇಲ್ ವಿರುದ್ಧ ಕೇಸ್ ದಾಖಲಾಗಿತ್ತು. ಪ್ರಕರಣ ಕೋರ್ಟ್ ಮೆಟ್ತಿಲೇರಿತ್ತು. ಹಾರ್ದಿಕ್ ಪಟೇಲ್ ವಿಚಾರಣೆಗೆ ಕೋರ್ಟ್ ಗೆ ಹಾಜರಾಗದ ಕಾರಣ ಹೆಚ್ಚುವರಿ ಸಿಜೆ ಎಂ ನ್ಯಾಯಾಧೀಶ ಡಿ.ಡಿ.ಶಾ, ಹಾರ್ದಿಕ್ ಪಟೇಲ್ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದಾರೆ.

ಹಾರ್ದಿಕ್ ಪಟೇಲ್ ಅವರನ್ನು ಬಂಧಿಸಿ ಮುಂದಿನ ವಿಚಾರಣೆಗೆ ಕೋರ್ಟ್ ಗೆ ಹಾಜರುಪಡಿಸಿ ಎಂದು ಧ್ರಾಂಗದಾರಾ ತಾಲುಕಿನ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

*ವಿಪಕ್ಷಗಳ ಗದ್ದಲಕ್ಕೆ ತಾಳ್ಮೆ ಕಳೆದುಕೊಂಡ ಸ್ಪೀಕರ್ ಕೆಂಡಾಮಂಡಲ*

Home add -Advt

https://pragati.taskdun.com/vidhanasabhespeaker-vishweshwara-hegade-kagerieshwara-khandre/

Related Articles

Back to top button