Kannada NewsKarnataka NewsLatest

*ಹಾರ್ಡ್ ವೇರ್ ಶಾಪ್ ನಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಅಂಗಡಿಗಳು*

ಪ್ರಗತಿವಾಹಿನಿ ಸುದ್ದಿ: ಹಾರ್ಡ್ ವೇರ್ ಶಾಪ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಸುತ್ತಮುತ್ತಲಿನ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಹೊತ್ತಿ ಉರಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ನಗರದ ಬಸ್ ನಿಲ್ದಾಣದ ಬಳಿ ಇರುವ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಒಂದು ಅಂಗಡಿಯಿಂದ ಇನ್ನೊಂದು ಅಂಗಡಿಗೆ ವ್ಯಾಪಿಸಿದ್ದು, 4-5 ಅಂಗಡಿಗಳು ಧಗಧಗನೆ ಹೊತ್ತಿ ಉರಿದಿವೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button