
ಪ್ರಗತಿವಾಹಿನಿ ಸುದ್ದಿ: ರೈಲು ಹಳಿಗಳ ಮೇಲೆಯೇ ಗುಡ್ಡ ಕುಸಿತವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಯಡೆಕುಮೇರಿ ಬಳಿ ನಡೆದಿದೆ.
ರೈಲ್ವೆ ಹಳಿಗಳ ಮೇಲೆಯೇ ಗುಡ್ಡ ಕುಸಿತವಾಗಿದ್ದು, ಈ ಭಾಗದ ರೈಲು ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಬೆಂಗಳೂರು-ಕಣ್ಣೂರು ಘಾಟ್ ರೈಲು, ಬೆಂಗಳೂರು-ಮುರುಡೇಶ್ವರ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಅರೆಬೆಟ್ಟ, ಯಡೆಕುಮೇರಿ ಮಧ್ಯೆ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಳಿ ಮೇಲೆ ಬಿದ್ದಿರುವ ಗುಡ್ದ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕೆಲ ರೈಲುಗಳು ಮಾರ್ಗಮಧ್ಯೆಯೇ ಸ್ಥಗಿತಗೊಂಡಿದ್ದು, ಪ್ರಯಾಣಿಕರಿಗೆ ನೀರು, ಟೀ, ಕಾಫಿ ವ್ಯವಸ್ಥೆ ಮಾಡಲಾಗುತ್ತಿದೆ.