Latest

*ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: 1.49 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿರುವ ಆರೋಪದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೋರ್ವರನ್ನು ಅಮಾನತು ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಬಿ.ಎನ್.ಭುವನ್ ಅಮಾನತುಗೊಂಡಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ. ಅರಕಲಗೋಡು ತಾಲೂಕಿನ ಕೊಣನೂರು ಗ್ರಾಮಪಂಚಾಯಿತಿ ಕಾರ್ಯದರ್ಶಿಯಾಗಿದ್ದ ಭುವನ್, ವಿವಿಧ ಯೋಜನೆಗಳ 1.49 ಕೋಟಿ ರೂಪಾಯಿ ದುರುಪಯೋಗಪಡಿಸಿಕೊಂಡಿರುವ ಆರೋಪವಿದೆ.

Home add -Advt

ಭುವನ್ ಕೊಣನೂರು ಜೊತೆ ಗಂಗೂರು ಗ್ರಾಮ ಪಂಚಾಯಿತಿಯ ಪ್ರಭಾರ ಕಾರ್ಯದರ್ಶಿಯೂ ಆಗಿದ್ದ. ಹಣ ದುರುಪಯೋಗ ಸಾಬೀತಾಗಿರುವ ಹಿನ್ನೆಲೆಯಲ್ಲಿ ಭುವನ್ ರನ್ನು ಜಿಲ್ಲಾ ಪಂಚಾಯತ್ ಸಿಇಒ ಬಿ.ಆರ್.ಪೂರ್ಣಿಮಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Related Articles

Back to top button