*BREAKING NEWS: ಹಾಸನಾಂಬೆ ದೇಗುಲದಲ್ಲಿ ಕಾಲ್ತುಳಿತ*

ಪ್ರಗತಿವಾಹಿನಿ ಸುದ್ದಿ; ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ದೇಗುಲದಲ್ಲಿ ಕಾಲ್ತುಳಿತವುಂಟಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಹಾಸನಾಂಬೆ ದರ್ಶನಕ್ಕಾಗಿ ರಾಜ್ಯದ ಹಲವು ಜಿಲ್ಲೆಗಳಿಂದ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಭಕ್ತರು ನಿಂತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ವಿದ್ಯುತ್ ಶಾಕ್ ನಿಂದಾಗಿ ಸಂತೆಪೇಟೆ ಧರ್ಮ ದರ್ಶನ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಲ್ಲಿ ದಿಢೀರ್ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ … Continue reading *BREAKING NEWS: ಹಾಸನಾಂಬೆ ದೇಗುಲದಲ್ಲಿ ಕಾಲ್ತುಳಿತ*