Kannada NewsKarnataka NewsLatest

ತಕ್ಷಣ ನದಿ ತೀರ ತೆರವು ಮಾಡಿ: ನೀರಾವರಿ ಇಲಾಖೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮಲಪ್ರಭಾ ಅಣೆಕಟ್ಟೆ (ನವಿಲುತೀರ್ಥ) ಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ಅಣೆಕಟ್ಟೆಯಿಂದ ನೀರು ಬಿಡುವ ಸಾಧ್ಯತೆ ಇದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಇಲಾಖೆ, ಮಲಪ್ರಭಾ ಅಣೆಕಟ್ಟೆಯ ಸಾಮರ್ಥ್ಯ 2079.50 ಅಡಿ. ಸಧ್ಯ 2066.70 ಅಡಿ ನೀರು ಭರ್ತಿಯಾಗಿದೆ. 48821 ಕ್ಯುಸೆಕ್ ನೀರು ಒಳಹರಿವಿದೆ. ಕೆಲವೇ ದಿನಗಳಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.

Home add -Advt

ಹಾಗಾಗಿ ಒಳಹರಿವನ್ನು ಆಧರಿಸಿ ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಬಿಡುವ ಸಾಧ್ಯತೆ ಇದೆ. ಹಾಗಾಗಿ ನದಿ ಪಾತ್ರದಲ್ಲಿರುವವರು ತಕ್ಷಣ ತಮ್ಮ ಆಸ್ತಿಪಾಸ್ತಿಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

 

Related Articles

Back to top button