Karnataka News

*ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಆರ್.ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.

Home add -Advt

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾಸನಾಂಬಾ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ 10.50 ಲಕ್ಷ ರೂ. ಮಂಜೂರು ಮಾಡಲು ಒಂದುವರೆಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ಆಧಾರಸಿ ಪಕ್ಕಾ ಪ್ಲಾನ್ ಮಾಡಿ ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಲಾಗಿದೆ.

Related Articles

Back to top button