Latest

*ಹಾಸನಾಂಬೆ ದೇವಿ ದರ್ಶನ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದೇವಾಲಯದ ಈ ಬಾರಿಯ ಸಾರ್ವಜನಿಕ ದರ್ಶನಕ್ಕೆ ಇಂದು ಮುಂಜಾನೆ 6.30ಕ್ಕೆ ಅಂತ್ಯಗೊಂಡಿತು.

ಅಹೋರಾತ್ರಿ ಸಾವಿರಾರು ಭಕ್ತರು ದರ್ಶನ ಪಡೆದರೂ ಬಾಗಿಲು ಹಾಕುವ ಕಡೆ ಗಳಿಗೆಯಲ್ಲಿ ದೇವಿ ದರ್ಶನಕ್ಕೆ ಕಾದು ನಿಂತಿದ್ದರು. ಆದರೆ ನಿಯಮಾನುಸಾರ ಅರ್ಚಕರು ಸಾರ್ವಜನಿಕ ದರ್ಶನ ಅಂತ್ಯಗೊಳಿಸಿದರು. ಇದರಿಂದ ಹಲವರು ದರ್ಶನ ಸಾಧ್ಯವಾಗದೆ ನಿರಾಸೆಗೊಂಡರು.

Home add -Advt

ಇಂದು ಅರ್ಚಕರು ದೇವಿಯ ಒಡವೆ, ವಸ್ತ್ರಗಳನ್ನು ತೆಗೆದಿರಿಸಿ ಈ ವರ್ಷದ ಅಂತಿಮ ಪೂಜೆ, ನೈವೇದ್ಯ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆ ನಂತರ ವಿಶ್ವರೂಪ ದರ್ಶನದ ಬಳಿಕ ಶಾಸ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಎಸ್ಪಿ ಮಹಮದ್ ಸುಜಿತಾ, ಎಸಿ ಮಾರುತಿ ಸಮ್ಮುಖದಲ್ಲಿ ಅರ್ಚಕರು ನಂದಾದೀಪ ಹಚ್ಚಿ ಗರ್ಭಗುಡಿ ಬಾಗಿಲು ಮುಚ್ಚಿ ಬೀಗಮುದ್ರೆ ಹಾಕಲಾಗಿದೆ

Related Articles

Back to top button