![LaxmiTai 5](https://pragativahini.com/wp-content/uploads/2024/06/Laxmi-Tai-add-5.jpg)
![GIT add 2024-1](https://pragativahini.com/wp-content/uploads/2024/04/GIT-add-2024-1.jpg)
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದ್ದ ಸತ್ಸಂಗ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 116 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳದಲ್ಲಿನ ಹೆಣಗಳ ರಾಶಿ ಕಂಡು ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದಸಾವನ್ನಪ್ಪಿರುವ ಘಟನೆ ನಡೆದಿದೆ.
ಹತ್ರಾಸ್ ನ ಪುಲ್ರೈ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಏಕಾಏಕಿ ಕಾಲ್ತುಳಿತ ಸಂಭವಿಸಿ 116 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
![Emergency Service](https://pragativahini.com/wp-content/uploads/2023/06/IMG-20221115-WA0034.jpg)
ರಾಶಿ ರಾಶಿ ಹೆಣಗಳನ್ನು ಕಂಡು ಆಘಾತಕ್ಕೊಳಗಾದ ಡ್ಯೂಟಿಯಲ್ಲಿದ್ದ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಜನೀಶ್ ಮೃತ ಪೊಲೀಸ್ ಪೇದೆ. ಇಆಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿ ಕಂಡು ಶಾಕ್ ಆಗಿದ್ದಾರೆ. ಈ ವೇಳೆ ತೀವ್ರ ಹೃದಯಾಘಾತಕ್ಕೊಳಗಾದ ರಜನೀಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಕರ್ತವ್ಯದಲ್ಲಿದ್ದ ರಜನೀಶ್ ಅವಘರ್ ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ ಭಾಗವಾಗಿದ್ದರು. ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು. ಆದರೆ ಅಲ್ಲಿದ್ದ ಹೆಣಗಳ ರಾಶಿ ಹಾಗೂ ಗೋಳಾಡುತ್ತಿರುವ ದೃಶ್ಯಕಂಡು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.