Kannada NewsKarnataka NewsLatest

*ಹೈಕೋರ್ಟ್ ನಲ್ಲಿ ನ್ಯಾಯಾಧೀಶರ ಎದುರೇ ವ್ಯಕ್ತಿಯಿಂದ ಆತ್ಮಹತ್ಯೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಹೈಕೋರ್ಟ್ ನಲ್ಲಿ ನ್ಯಾಯಾಧೀಶರ ಎದುರಲ್ಲೇ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

Home add -Advt

ಮೈಸೂರು ಮೂಲದ ಶ್ರೀನಿವಾಸ್ ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹೈಕೋರ್ಟ್ ಹಾಲ್ ನಲ್ಲಿಯೇ ಚಾಕುವಿನಿಂದ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಶ್ರೀನಿವಾಸ್ ಗೆ ಸಂಬಂಧಿಸಿದ ಪ್ರಕರಣವೊಂದು ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆ ಅಂತ್ಯಕ್ಕೆ ತಲುಪುತ್ತಿದ್ದಂತೆ ನ್ಯಾಯಮೂರ್ತಿಗಳ ಎದುರು ಬಂದ ಶ್ರೀನಿವಾಸ್ ಅರ್ಜಿಯೊಂದನ್ನು ನ್ಯಾಯಾಲಯದ ಸಿಬ್ಬಂದಿಗೆ ನೀಡಿ ಚಾಕುವಿನಂತಹ ಆಯುಧದಿಂದ ಕತ್ತು ಕುಯ್ದುಕೊಂಡಿದ್ದಾನೆ.

ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಆತನನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಹೈಕೋರ್ಟ್ ಕೇಂದ್ರ ವಿಭಾದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Related Articles

Back to top button