Kannada NewsKarnataka News

*ಖಾಸಗಿ ಬಸ್-ಕಾರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ : ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಬಳಿ ನಡೆದಿದೆ.

ಮೃತರನ್ನು ದೊಡ್ಡಬಳ್ಳಾಪುರ ಮೂಲದ ಅಕ್ಷಯ್(28) ಹಾಗೂ ಶರಣ್ (26) ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರದಿಂದ ಹೊನ್ನಾವರಕ್ಕೆ ಹೊರಟಿದ್ದ ಅವರು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ.

Home add -Advt

ಸದ್ಯ ಘಟನೆ ಸಂಬಂಧಪಟ್ಟಂತೆ ಸ್ಥಳಕ್ಕೆ ಆನಂದಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Related Articles

Back to top button