Kannada NewsKarnataka News

*ಹಠಾತ್ ಹೃದಯಾಘಾತ: ಪದವಿ ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ: ಪದವಿ ವಿದ್ಯಾರ್ಥಿನಿಯೊಬ್ಬರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Home add -Advt

ಹಾಸನ ಮೂಲದ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾದ ವಿದ್ಯಾರ್ಥಿನಿ. ಹಾಸನದ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ಸುಪ್ರಿಯಾ, ಪದವಿ ವ್ಯಾಸಂಗಕ್ಕಾಗಿ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದರು. ಇದ್ದಕ್ಕಿದ್ದಂತೆ ಕುಸಿದು ಬಿದ್ದ ಸುಪ್ರಿಯಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಈ ಮೂಲಕ ಹೃದಯಾಅಘಾತಕ್ಕೆ ಸಾವನ್ನಪ್ಪಿದವರ ಹಾಸನ ಮೂಲದವರ ಸಂಖ್ಯೆ 14ಕ್ಕೆ ಏರಿಕೆಯಾದಂತಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲಿಯೂ ಕಳೆದ ಕೆಲ ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ ಸಣ್ಣ ವಯಸ್ಸಿನವರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Related Articles

Back to top button