Karnataka News

*ಪ್ರವಾಸಿಗರನ್ನು ಕರೆತಂದಿದ್ದ ಟಿಟಿ ಚಾಲಕ ಏಕಾಏಕಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂನಿಂದ ಚಿಕ್ಕಮಗಳೂರಿಗೆ ಪ್ರವಾಸಿಗರನ್ನು ಕರೆತಂದಿದ್ದ ಟಿಟಿ ವಾಹನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅವಿನಾಶ್ (25) ಮೃತ ಚಾಲಕ. ಬೆಂಗಳೂರಿನ ಸೋಮನಹಳ್ಳಿ ಮೂಲದವರಾಗಿದ್ದ ಅವಿನಾಶ್ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಎರಡು ವರ್ಷದ ಮಗು ಕೂಡ ಇದೆ.

Home add -Advt

ಬೆಂಗಳೂರಿನಿಂದ ಪ್ರವಾಸಿಗರನ್ನು ಟಿಟಿಯಲ್ಲಿ ಚಿಕ್ಕಮಗಳೂರಿಗೆ ಕರೆತಂದಿದ್ದ ಅವಿನಾಶ್, ಪ್ರವಾಸಿಗರನ್ನು ಹೋಂ ಸ್ಟೇ ಬಳಿ ಬಿಟ್ಟು ತೆರಳಿದ್ದರು. ಈ ವೇಳೆ ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಕೊನೆಯುಸಿರೆಳೆದಿದ್ದರು.

ಚಿಕ್ಕಮಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button