Karnataka News

*ಉಷ್ಣ ಅಲೆ ಹಿನ್ನೆಲೆ: ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿದ್ದು, ಜನರು ಹೈರಾಣಾಗಿದ್ದಾರೆ. ಬಿಸಿಲ ಧಗೆಯಿಂದಾಗಿ ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ.

ಈ ನಡುವೆ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುತ್ತಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಕರಾವಳಿ ಜಿಲ್ಲೆಗಳಲ್ಲಿ ಅತಿಹೆಚ್ಚು ಉಷ್ಣಾಂಶ ದಾಖಲಾಗಿದೆ. ಅದರಲ್ಲಿಯೂ ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಲ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಇತ್ತ ಚಾಮರಾಜನಗರ ಜಿಲ್ಲೆಯಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಉಳಿದಂತೆ ಬೆಳಗಾವಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ, ಬೆಂಗಳೂರು ಸೇರಿದಂತೆ ವಿವಿಧೆಡೆ ಒಣಹವೆ ಇರಲಿದೆ.

Related Articles

Back to top button