*ಸಿಡಿಲು ಬಡಿದು ಓರ್ವ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲೆಗಳಲ್ಲಿ ಗುಡುಗು, ಬಿರಿಗಾಳಿ ಸಹಿತ ಮಳೆಯಾಗುತ್ತಿದ್ದು, ರಣಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿ, ಮಲೆನಾಡಿನ ಕೆಲ ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗಿದ್ದರೆ ಇನ್ನು ಹಲವೆಡೆ ಬಿಸಿಲ ಧಗೆ ಹೆಚ್ಚಾಗಿದೆ. ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದ್ದು, ವರುಣಾರ್ಭಟಕ್ಕೆ ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನು ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಆದರೆ ಬರಗಾಲದ ಜೊತೆಗೆ ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಅನ್ನದಾತನ ಮೊಗದಲ್ಲಿ ಮಳೆಯಿಂದಾಗಿ ಕೊಂಚ ಸಮಾಧಾನ ತಂದಿದೆ. … Continue reading *ಸಿಡಿಲು ಬಡಿದು ಓರ್ವ ದುರ್ಮರಣ*