Belgaum NewsKannada NewsKarnataka News

*ರಾಜ್ಯದಲ್ಲಿ ಮೂರ್ನಾಲ್ಕು ದಿನ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಲ್ಲಿ ಮುಂದಿನ ಮೂರ್ನಾಲ್ಕು ದಿನ ಒಟ್ಟು 22 ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹಾಸನ, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ಕೊಪ್ಪಳದಲ್ಲಿ ಉತ್ತಮ ಮಳೆಯಾಗಲಿದೆ.

Home add -Advt

ಇನ್ನು ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲೂ ಮಳೆ ಸುರಿಯಲಿದೆ.

ಇನ್ನು ಬಳ್ಳಾರಿ, ಬೆಂಗಳೂರು, ಕೋಲಾರ, ಶಿವಮೊಗ್ಗ ಹಾಸನ ಸೇರಿದಂತೆ ಹಲವೆಡೆ ಮಳೆಯ ಜೊತೆಗೆ ಬಿರುಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ಅಂದಾಜಿಸಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

Related Articles

Back to top button