*ಭಾರಿ ಮಳೆಗೆ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿ ಬಂದ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಹೊನ್ನಾವರದ ಭಾಸ್ಕೆರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 ಸಂಚಾರ ಬಂದ್ ಆಗಿದೆ. ಹೊನ್ನಾವರ -ಸಾಗರ-ಬೆಂಗಳೂರು ಮಾರ್ಗ ಬಂದ್ ಆಗಿದ್ದು ಬಸ್‌ ಹಾಗೂ ಭಾರೀ ಗಾತ್ರದ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ. ರಸ್ತೆಯ ಒಂದು ಭಾಗದಲ್ಲಿ ದ್ವಿಚಕ್ರ ವಾಹನ ತೆರಳಲು ಮಾತ್ರ ಅವಕಾಶವಿದ್ದು, ಈಗ ಬೆಂಗಳೂರು ಕಡೆ ತೆರಳುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಸದ್ಯ ಹೆದ್ದಾರಿಗೆ ಬಿದ್ದ ಕಲ್ಲುಬಂಡೆಯನ್ನು ತೆರವುಗೊಳಿಸಲು … Continue reading *ಭಾರಿ ಮಳೆಗೆ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿ ಬಂದ್*