Belagavi NewsBelgaum NewsKannada NewsKarnataka News

*ಮುಂದಿನ ಐದು ದಿನ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣಮಳೆ ಆರ್ಭಟಿಸಿದ್ದು ಮುಂದಿನ 5 ದಿನಗಳ ಕಾಲ ಭಾರಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಅದೇ ರೀತಿಯಾಗಿ ಬೆಳಗಾವಿ, ಬೀದ‌ರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳು, ರಾಯಚೂರು, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಆಗಸ್ಟ್ 10 ಹಾಗೂ 11 ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ರಾಮನಗರ, ಮೈಸೂರು, ಕೋಲಾರ, ಮಂಡ್ಯ ಮೈಸೂರು ಮುಂತಾದ ಕಡೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. 

Home add -Advt

Related Articles

Back to top button