Belagavi NewsBelgaum NewsKannada NewsKarnataka News

*ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ: ರೈತರಲ್ಲಿ ಮೂಡಿದ ಮಂದಹಾಸ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಾದ್ಯಂತ ಇಂದು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಗೆ ಅಲ್ಲಿನ ರೈತರು, ಜನರು ಫುಲ್ ಖುಷ್ ಆಗಿದ್ದಾರೆ.

ಹಲವು ತಿಂಗಳಿನಿಂದ ಮಳೆಗಾಗಿ ಕಾದಿದ್ದ ಜನರಿಗೆ, ರೈತರಿಗೆ ಇಂದು ಏಕಾಏಕಿ ಸುರಿದ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.‌ ಚಿಕ್ಕೋಡಿ ತಾಲೂಕಿನಾದ್ಯಂತ ಇಂದು ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ.

ಈ ಬಾರಿ ಅದೆಷ್ಟೋ ರೈತರು ಮಳೆ ಇಲ್ಲದೆ ಬೆಳೆಯನ್ನು ಬೆಳೆದಿರಲಿಲ್ಲ, ಕೆಲವು ರೈತರು ಪರ್ಯಾಯ ವ್ಯವಸ್ಥೆ ಮೂಲಕ ಅಲ್ಪಸ್ವಲ್ಪ ಬೆಳೆ ಬೆಳೆದಿದ್ದರು, ಇದೀಗ ಚಿಕ್ಕೋಡಿ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button