Karnataka NewsLatestPolitics
*ಸ್ವತಃ ಬೈಕ್ ಓಡಿಸಿ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಹೆಬ್ಬಾಳದಲ್ಲಿ ಬಿಡಿಎ ಕೈಗೆತ್ತಿಕೊಂಡಿರುವ ಮೇಲ್ಸೇತುವೆ ಕಾಮಗಾರಿಯನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಂಗಳವಾರ ಪರಿಶೀಲನೆ ನಡೆಸಿದರು.

ಸ್ವತಃ ಬೈಕ್ ಚಲಾಯಿಸಿಕೊಂಡು ಬಂದು ಮೇಲ್ಸೇತಿವೆ ಕಾಮಗಾರಿ ಪರುಶೀಲಿಸಿದ್ದು, ವಿಶೇಷವಾಗಿತ್ತು. ಸಚಿವರಾದ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷ, ಶಾಸಕ ಎನ್.ಎ. ಹ್ಯಾರೀಸ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಬಿಎ ಆಡಳಿತಗಾರ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಮಣಿವಣ್ಣನ್, ಬಿ.ಎಂ.ಆರ್.ಡಿ.ಎ ಆಯುಕ್ತ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.