Karnataka News
*ಗುಪ್ತಚರ ಇಲಾಖೆ ADGP ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣದ ಬಗ್ಗೆ ಗುಪ್ತಚರ ಇಲಾಖೆ ವೈಫಲ್ಯವೇ ನೇರ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಸಚಿವ ರಾಮಲಿಂಗ ರಡ್ಡಿ ಸೇರಿದಂತೆ ಹಲವು ಸಚಿವರು ನೇರವಾಗಿ ಆರೋಪುಸಿದ್ದರು.
ಇದರ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.




