Belagavi NewsBelgaum NewsKannada NewsKarnataka News
*ಸಚಿವ ಕೆ.ಜೆ ಜಾರ್ಜ್ರನ್ನು ಭೇಟಿಯಾದ ಹೆಸ್ಕಾಂ ಅಧ್ಯಕ್ಷರಾದ ಖಾದ್ರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರನ್ನು ಹೆಸ್ಕಾಂ ಅಧ್ಯಕ್ಷರಾದ ಸೈಯದ್ ಅಜೀಮ್ಪೀರ್ ಎಸ್ ಖಾದ್ರಿ ಅವರು ಗುರುವಾರ ಭೇಟಿ ನೀಡಿ, ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು.
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಇಜಾಜ್ ಹುಸೇನ್ ಅವರನ್ನು ಭೇಟಿ ಮಾಡಿದ ಅಧ್ಯಕ್ಷರು, ಸರ್ಕಾರಿ ಸಂಸ್ಥೆಗಳಿಂದ ಹೆಸ್ಕಾಂಗೆ ಬರಬೇಕಿರುವ ಬಾಕಿ ಮೊತ್ತ ಶೀಘ್ರವೇ ಬಿಡುಗಡೆ ಮಾಡುವಂತೆ ಕೋರಿದರು.



