Belagavi NewsBelgaum NewsKarnataka News

*ಇಂದಿನಿಂದ ಹೆಚ್ಚಲಿದೆ ಮಳೆಯ ಅಬ್ಬರ: ಎಲ್ಲೆಲ್ಲಿ ಮಳೆ ಇಲ್ಲಿದೆ ಸಂಪೂರ್ಣ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿಯಾಗಿದ್ದು, ಇಂದಿನಿಂದ ಮತ್ತಷ್ಟು ಮಳೆ ಅಬ್ಬರ ಜೋರಾಗಲಿದೆ. ಮುಂದಿನ ಮೂರ್ನಾಲ್ಕು ದಿನ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಕೂಡ ಮುನ್ಸೂಚನೆ ನೀಡಿದೆ.

ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ವಿಜಯನಗರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಜಿಲ್ಲೆಗಳಲ್ಲಿ ಜೂನ್ 11ರಿಂದ ಮತ್ತಷ್ಟು ಮಳೆ ಹೆಚ್ಚಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ಬೆಂಗಳೂರು ನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತಮ ಆರಂಭ ಪಡೆದಿದ್ದ ಮುಂಗಾರು ದಕ್ಷಿಣ ಒಳನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಕ್ಷೀಣಿಸಿತ್ತು. 

ರೈತಾಪಿ ವರ್ಗ ಕೃಷಿ ಚಟುವಟಿಕೆ ಆರಂಭಿಸಿ ನಂತರ ಆತಂಕಕ್ಕೆ ಒಳಗಾಗಿತ್ತು. ಇದೀಗ ಮತ್ತೆ ಮಳೆ ಆರಂಭದ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Home add -Advt

Related Articles

Back to top button