Latest

ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭ; ಪೊಲೀಸ್ ಬಿಗಿ ಭದ್ರತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಪ್ರೌಢಶಾಲೆಗಳು ಇಂದಿನಿಂದ ಆರಂಭವಾಗಿದ್ದು, ರಾಜ್ಯಾದ್ಯಂತ ಶಾಲೆಗಳ ಸುತ್ತ ಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿವೆ.

ಹಿಜಾಬ್ ಸಂಘರ್ಷದಿಂದಾಗಿ ಸರ್ಕಾರ ನಾಲ್ಕು ದಿನ ರಜೆ ಘೋಷಿಸಿಸಿತ್ತು. ಬಿಗಿ ಭದ್ರತೆಯಲ್ಲಿ ಇಂದಿನಿಂದ 9 ಹಾಗೂ 10ನೇ ತರಗತಿಗಳು ಆರಂಭವಾಗಿವೆ. ಕೆಲ ದಿನಗಳವರೆಗೆ ಶಾಲೆಯಲ್ಲಿ ಯಾವುದೇ ಕಾರ್ಯಕ್ರಮಗಳ ಆಯೋಜನೆಗೆ ಅನುಮತಿ ನೀಡಲಾಗಿಲ್ಲ. ತರಗತಿಗಳು ಮಾತ್ರ ನಡೆಯಲಿದ್ದು, ಯಾವುದೇ ಧಾರ್ಮಿಕ ಗುರುತು ಧರಿಸಿ ತರಗತಿಗಳಿಗೆ ಹಾಜರಾಗುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ.

ಇನ್ನು ಹಿಜಾಬ್ ಕುರಿತು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಇಂದು ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಯಲಿದೆ. ಕೋರ್ಟ್ ನೀಡಲಿರುವ ತೀರ್ಪಿಗಾಗಿ ರಾಜ್ಯವೇ ಕಾದು ಕುಳಿತಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button