Kannada NewsLatestNational

*ಕಂದಕಕ್ಕೆ ಉರುಳಿ ಬಿದ್ದ ಬಸ್: 13 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು 13 ಜನರು ಸಾವನ್ನಪ್ಪಿರುವ ದಾರುಣ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಇಲ್ಲಿನ ಸಿರ್ಮೌರ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ದುರಂತದಲ್ಲಿ 13 ಜನರು ಮೃತಪಟ್ತಿದ್ದು, 40 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಶಿಮ್ಲಾದಿಂದ ರಾಜಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಬಿದ್ದಿದೆ. ರಸ್ತೆಯಲ್ಲಿ ಭಾರಿ ಹಿಮ ಆವರಿಸಿದ್ದರಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

Related Articles

Back to top button