Kannada NewsKarnataka NewsLatest

ನಾಳೆ 4 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ನಾಳೆ 4 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಬೆಳಗಾವಿ ಜಿಲ್ಲೆಯ ಹಲವೆಡೆ ಕಳೆದ 4 ದಿನದಿಂದ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದಗಿ ಹಲವೆಡೆ ಶಾಲೆಗಳಿಗೆ ಸಂಪರ್ಕ ಕಡಿತಗೊಂಡಿದೆ. ಹಲವೆಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ಕೆಲವೆಡೆ ಶಾಲಾ ಕೊಠಡಿಗಳು ಸೋರುತ್ತಿರುವುದರಿಂದ ಕಟ್ಟಡಗಳು ಶಿಥಿಲಗೊಂಡಿವೆ. ಹಾಗಾಗಿ ಕೊಠಡಿಗಳು ಕುಸಿಯುವ ಸಂಭವವಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 4 ತಾಲೂಕುಗಳ ಶಾಲೆಗಳಿಗೆ ಜುಲೈ 31 ಮತ್ತು ಆ.1ರಂದು ರಜೆ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ, ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ 4 ತಾಲೂಕುಗಳ ಶಾಲೆಗಳಿಗ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ, ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕುಗಳ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಜುಲೈ 31ರಂದು (ಒಂದು ದಿನ ಮಾತ್ರ) ರಜೆ ಘೋಷಿಸಿದ್ದಾರೆ.

Home add -Advt

ಮುಂದೆ ಬರು ಭಾನುವಾರ ಶಾಲೆ ನಡೆಸಿ ಬೋಧನಾ ಕಲಿಕಾ ಅವಧಿಯನ್ನು ಸರಿದೂಗಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button