
ಪ್ರಗತಿವಾಹಿನಿ ಸುದ್ದಿ: ಇನ್ಮುಂದೆ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು-ಶಂಪೂಗಳ ಮಾರಾಟ, ಬಳಕೆ ನಿಷೇಧಿಸಲಾಗಿದೆ. ಈ ಬಗ್ಗೆ ಅರಣ್ಯ ಮತ್ತು ಪರಿಸರ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ತೀರ್ಥಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದ್ದು, ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈ ಆದೇಶ ಹೊರದಿಸಿದೆ.
ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪೂ ಮಾರಾಟಮಾಡಬಾರದು, ಭಕ್ತರು, ಯಾತ್ರಿಕರು ತಮ್ಮ ವಸ್ತುಗಳನ್ನು ನದಿ ತೀರದಲ್ಲಿ ವಿಸರ್ಜನೆ ಮಾಡಬಾರದು ಎಂದು ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಸಚಿವ ಈಶ್ವರ ಖಂಡ್ರೆ ಆದೇಶ ಹೊರಡಿಸಿದ್ದಾರೆ.