Latest

ಹರ್ಷ ಕೊಲೆಯಲ್ಲಿ ಐವರು ಭಾಗಿ : ಗೃಹ ಸಚಿವ ಅರಗ ಜ್ಞಾನೇಂದ್ರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಹರ್ಷ ಹತ್ಯೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಎಡಿಜಿಪಿ ಮುರುಗನ್ ಅವರನ್ನು ಜಿಲ್ಲೆಗೆ ಕಳುಹಿಸಲಾಗಿದೆ. ಪರಿಸ್ಥಿತಿ ತಹಬದಿಗೆ ಬಂದಿದೆ ಎಂದರು.

Related Articles
Home add -Advt

ಪ್ರಕರಣದಲ್ಲಿ ಮೇಲ್ನೋಟಕ್ಕೆ ಐವರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಅವರ ಹಿಂದೆ ಎಷ್ಟು ಜನರ ಕೈವಾಡವಿದೆ ಎಂಬುದು ತನಿಖೆಯಿಂದ ಬಯಲಾಗಲಿದೆ. ಹತ್ಯೆ ಯಾಕಾಯ್ತು? ಯಾರಾಲೆಲ್ಲ ಭಾಗಿಯಾಗಿದ್ದಾರೆ ಎಂಬ ಬಗ್ಗೆ ತನಿಖೆ ಬಳಿಕ ಮಾಹಿತಿ ಸಿಗಲಿದೆ. ಪ್ರಸ್ತುತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಷ್ಟು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂಬುದು ಗೊತ್ತಿಲ್ಲ. ಬಂಧಿತ ಮೂವರು ಯಾರು? ಅವರ ವಿವರವೇನು ಎಂದು ಸಧ್ಯಕ್ಕೆ ಮಾಹಿತಿ ಹೊರಹಾಕುವಂತಿಲ್ಲ ಎಂದು ತಿಳಿಸಿದರು.

ಹರ್ಷ ಕುಟುಂಬಕ್ಕೆ ಸರ್ಕಾರದಿಂದ ಭದ್ರತೆ ಕಲ್ಪಿಸಲಾಗಿದೆ. ಒಂದು ಕೊಲೆಯಾಗಿದೆ, ಹೀಗಾಗಿ ಕೂಲ್ ಆಗಿ ಪರಿಸ್ಥಿತಿ ನಿಭಾಯಿಸಬೇಕು. ಜನರು ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಕೊಲೆ ಯಾಕಾಯ್ತು ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ. ಹರ್ಷ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಪಕ್ಷದ ಯಾರೂ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ, ಹಲವರು ಅವರವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಹೇಳಿದರು.
ನಾಚಿಕೆ ಆಗ್ತಿದೆ; ಸಿಎಂ ಬೊಮ್ಮಾಯಿಗೆ ಹಿಗ್ಗಾ ಮುಗ್ಗಾ ಝಾಡಿಸಿದ ಪ್ರತಾಪ ಸಿಂಹ

Related Articles

Back to top button