Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಮತ್ತೊಂದು ದುರಂತ; ಮನೆ ಗೋಡೆ ಕುಸಿದು ಯುವಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಮತ್ತೊಂದು ದುರಂತ ಸಂಭವಿಸಿದೆ.

ಮನೆ ಗೋಡೆ ಕುಸಿದು ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲುಕಿನಲ್ಲಿ ನಡೆದಿದೆ. 23 ವರ್ಷದ ಯುವಕ ಕಾಶಿನಾಥ್ ಸುತಾರ್ ಮೃತ ವ್ಯಕ್ತಿ.

Home add -Advt

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ತೇವಗೊಂಡು ಏಕಾಏಕಿ ಕುಸಿದು ಬಿದ್ದಿದೆ. ಅವಶೇಷಗಳಡಿ ಸಿಲುಕಿದ ಯುವಕ ಸಾವನ್ನಪ್ಪಿದ್ದಾನೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ತಿದೆ.

ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button