Kannada NewsKarnataka NewsLatest

ತೋಟದ ಮನೆಯಲ್ಲಿ 25ಕ್ಕೂ ಹೆಚ್ಚು ಬುರುಡೆಗಳು ಪತ್ತೆ; ಮಾಟಮಂತ್ರದ ಬಗ್ಗೆ ಶಂಕೆ

ಪ್ರಗತಿವಾಹಿನಿ ಸುದ್ದಿ: ರಾಮನಗರ ಜಿಲ್ಲೆಯ ಬಿಡದಿ ಬಳಿಯ ತೋಟದ ಮನೆಯಲ್ಲಿ 25 ಹೆಚ್ಚು ಬುರುಡೆಗಳು ಪತ್ತೆಯಾಗಿದ್ದು, ಮಾಟಮಂತ್ರದ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಬಲರಾಮ್ ಎಂಬಾತ ಬಿಡದಿ ಬಳಿಯ ಜೋಗನಹಳ್ಳಿಯ ತೋಟದ ಮನೆಯಲ್ಲಿ ಬುರುಡೆಗಳನ್ನು, ಮೂಳೆಗಳನ್ನು ಸಂಗ್ರಹಿಸಿಟ್ಟಿದ್ದು, ಇದನ್ನು ಕಂಡ ಸ್ಥಳೀಯರು ಕಂಗಾಲಾಗಿದ್ದಾರೆ.

ತಡರಾತ್ರಿ ಬಲರಾಮ ಎಂಬಾತ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದ. ಇದನ್ನು ಗಮನಿಸಿದ ಗ್ರಾಮಸ್ಥರು ಆತನ ಮನೆ ಬಳಿ ಹೋಗಿ ನೋಡಿದಾಗ ಮನೆ ತುಂಬೆಲ್ಲ ಬುರುಡೆಗಳು ಪತ್ತೆಯಾಗಿವೆ. ಬಲರಾಮನ ವಿರುದ್ಧ ಮಾಟಮಂತ್ರ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಲರಾಮನನ್ನು ವಶಕ್ಕೆ ಪಡೆದಿದ್ದಾರೆ.


Related Articles

Back to top button