Kannada NewsLatest

ಬೆಳಗಾವಿ ಪೊಲೀಸರಿಂದ ಸಾರ್ವಜನಿಕರಲ್ಲಿ ವಿಶೇಷ ಮನವಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ:  ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕನ್ನಡದ ’ಹೊಯ್ಸಳ’ ಸಿನಿಮಾ ಚಿತ್ರೀಕರಣ ನಡೆದಿದ್ದು, ಈ ಚಿತ್ರದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಪೊಲೀಸ್ ಇಲಾಖೆ ಬಗ್ಗೆ ತಪ್ಪು ಸಂದೇಶ ರವಾನೆಯಾಗುವಂತೆ ಮಾಡಿದೆ.

ಈ ದೃಶ್ಯದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ವ್ಯಕ್ತಿಯೋರ್ವನನ್ನು ಕೆಳಗೆ ತಳ್ಳಿ ಬೂಟುಗಾಲಿನಿಂದ ಒದೆಯುತ್ತಿರುವ ದೃಶ್ಯವಿದ್ದು, ಇದನ್ನು ನೈಜ ಘಟನೆಯೆಂಬಂತೆ ಬಿಂಬಿಸಿ ಪೊಲೀಸ್ ಇಲಾಖೆ ಬಗ್ಗೆ ತಪ್ಪು ಸಂದೇಶ ರವಾನಿಸಲಾಗುತ್ತಿದೆ.

ಇದನ್ನು ತಪ್ಪಾಗಿ ಅರ್ಥೈಸಿಕೊಳ್ಳದಂತೆ ಹಾಗೂ ಪೊಲೀಸ್ ಇಲಾಖೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಋಣಾತ್ಮಕವಾಗಿ ಪೋಸ್ಟ್, ಕಮೆಂಟ್ಸ್ ಮಾಡದಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹೊಸ ಅಭಿಯಾನ ಆರಂಭ

https://pragati.taskdun.com/votersdata-entrybbmp/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button