Karnataka News

*ಹುಬ್ಬಳ್ಳಿ-ಧಾರವಾಡ ಬಂದ್: ಟಾಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಡಾ.ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು ಹುಬ್ಬಳ್ಳಿ- ಧಾರವಾಡದಲ್ಲಿ ಬಂದ್‌ಗೆ ಕರೆ ನೀಡಿವೆ.

ಬಂದ್ ಪರಿಣಾಮವಾಗಿ ಹಲವು ಕಡೆ ಖಾಸಗಿ ಬಸ್, ವಾಹನಗಳ ಚಕ್ರಗಳ ಗಾಳಿ ತೆಗೆದಿದ್ದು ಚನ್ನಮ್ಮ ವೃತ್ತದ ಬಳಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಪ್ರತಿಭಟನಾಕಾರರು ವಿವಿಧ ಕಡೆ ತೆರಳಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸಿದರು.

Home add -Advt

ಬೆಳಿಗ್ಗೆ 6 ಗಂಟೆಯಿಂದಲೇ ಚನ್ನಮ್ಮ ವೃತ್ತ ಹೊಸೂರು ಸೇರಿದಂತೆ ಪ್ರಮುಖ ರಸ್ತೆ, ವೃತ್ತಗಳಲ್ಲಿ ಅಂಗಡಿ, ಮಳಿಗೆಗಳು ಮುಚ್ಚಿದ್ದರೆ ಒಳ ರಸ್ತೆಗಳಲ್ಲಿ ಕೆಲವೊಂದು ಮಳಿಗೆ, ಅಂಗಡಿಗಳು ತೆರೆದಿತ್ತು ಬಂದ್ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Related Articles

Back to top button