Latest

*ಇಬ್ಬರು ರೌಡಿಗಳ ಮೇಲೆ ಹುಬ್ಬಳ್ಳಿ ಪೊಲೀಸರಿಂದ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಯುವಕನನ್ನು ಹತ್ಯೆಗೈದು ಪೊಲೀಸರಿಂದ ಕೆಲವೇ ಗಂಟೆಗಳಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಹುಬ್ಬಳ್ಳಿ ಪೊಲೀಸರು ಗುಂಡೇಟು ನೀಡಿದ್ದಾರೆ.

ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಸೇರಿ ಶಿವು ಚಂದ್ರಶೇಖರ ಕಮ್ಮಾರ ಎಂಬಾತನನ್ನು ಚಾಕು ಇರಿದು ಹತ್ಯೆಗೈದಿದ್ದರು. ಶುಕ್ರವಾರ ರಾತ್ರಿ ಗೋಪನಕೊಪ್ಪದ ಬಳಿ ಆರೋಪಿಗಳು ಕೊಲೆಗೈದಿದ್ದರು. ಈ ಸಂಬಂಧ ಅಶೋಕ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಇಬ್ಬರು ಸೇರಿ ಉಳಿದ ಆರೋಪಿಗಳನ್ನು ತೋರಿಸುವುದಾಗಿ ಕರೆದೊಯ್ದು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರ ಕಾಲಿಗೂ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button