Kannada NewsKarnataka NewsLatest

*ತಮ್ಮನನ್ನೇ ಬರ್ಬರವಾಗಿ ಕೊಲೆಗೈದ ಅಣ್ಣ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಸ್ವಂತ ತಮ್ಮನನ್ನೇ ಅಣ್ಣ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ.

30 ವರ್ಷದ ಪವನ್ ಅಣ್ಣನಿಂದಲೇ ಕೊಲೆಯಾದ ವ್ಯಕ್ತಿ. ರಾಜು ತಮ್ಮನನ್ನೇ ಕೊಲೆ ಮಾಡಿರುವ ಆರೋಪಿ. ಪವನ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎಂಬ ಕಾರಣಕ್ಕೆ ಕ್ಫಗೊಂದ ಅಣ್ಣ ಚಾಕುವಿನಿಂದ ಮನಬಂದಂತೆ ಇರಿದು ಕೊಲೆಗೈದಿದ್ದಾನೆ.

ಪವನ್ ಹೊಟ್ಟೆ ಹಾಗೂ ಕುತ್ತಿಗೆಯ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆರೋಪಿ ಅಣ್ಣ ರಾಜುನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button