Belagavi NewsBelgaum NewsKannada NewsKarnataka NewsPolitics

*ಬಸವ ಜಯಂತಿ ಉತ್ಸವ ಪ್ರಯುಕ್ತ “ಸಮಾನತೆಗಾಗಿ” ಬೃಹತ್ ಬೈಕ್ ರ್ಯಾಲಿ: ಬಸವರಾಜ ರೊಟ್ಟಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಸವ ಜಯಂತಿ ನಿಮಿತ್ತ ಇದೆ ರವಿವಾರ ದಿನಾಂಕ 19 ರಂದು  ಬೃಹತ್ ಬೈಕ್ ರ್ಯಾಲಿಯನ್ನು ಬೆಳಗಾವಿ ಮಹಾನಗರದಲ್ಲಿ ಆಯೋಜಿಸಲಾಗಿದೆ ಎಂದು ಬಸವ ಜಯಂತಿ ಉತ್ಸವ-2026 ಸಮಿತಿಯ ಸಂಚಾಲಕ ಬಸವರಾಜ ರೊಟ್ಟಿ ಹೇಳಿದರು.

ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತಬಾಡಿದ ಅವರು,  ಬೆಳಗಿನ 8:00 ಗಂಟೆಗೆ  ಶಹಾಪೂರ ಗೋವಾವೇಸ  ಬಸವೇಶ್ವರ ಸರ್ಕಲ್ ದಿಂದ ಆರಂಭವಾಗುವ ಈ ರ್ಯಾಲಿಯಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಬೈಕ್ ಗಳು ಮತ್ತು ಕಾರುಗಳು ಭಾಗಿಯಾಗಲಿವೆ. ಬಸವಣ್ಣನವರು ಸಾರಿದ ಸಮಾನತೆಗಾಗಿ ಈ ರ್ಯಾಲಿಯನ್ನು ಆಯೋಜಿಸಲಾಗಿದ್ದು ಸಮಾಜದ ಸಮಸ್ತ ಜನ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದವರು ವಿನಂತಿಸಿದರು.

ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಸ್ವಾಮೀಜಿಯವರು, ಬೆಳಗಾವಿಯ ಸಂಸದ ಜಗದೀಶ್ ಶೆಟ್ಟರ್ , ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಧ್ಯಕ್ಷ ಡಾ.

 ಪ್ರಭಾಕರ್ ಕೋರೆ ಅವರುಗಳು ಚಾಲನೆ ನೀಡಲಿದ್ದಾರೆ. 

Home add -Advt

ಬೆಳಗಾವಿಯ ಮಹಾಪೌರ ಪ್ರೀತಿ ಕಾಮಕರ್, ಉಪಮಹಾಪೌರ ಹನುಮಂತ ಕೊಂಗಾಲಿ, ಶಾಸಕರಾದ ಅಭಯ್ ಪಾಟೀಲ್, ರಾಜು ಸೇಠ ಮತ್ತು ನಗರ ಸೇವಕರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದವರು ವಿವರಿಸಿದರು. 

ರ್ಯಾಲಿಯೂ ಬಸವೇಶ್ವರ ಸರ್ಕಲದಿಂದ ಆರಂಭವಾಗಿ ತಿಳಕವಾಡಿ, ಅನುಗೋಳ, ವಡಗಾವ್ ,ಖಾಸಬಾಗ್, ಶಹಪುರ್ , ಕಪಿಲೇಶ್ವರ ರೋಡ್, ಕರ್ನಾಟಕ ಚೌಕ್, ರವಿವಾರಪೇಟೆ, ಖಡೆ ಬಾಜಾರ್, ಮಾರುತಿ ಗಲ್ಲಿ , ರಾಮದೇವ್ ಗಲ್ಲಿ, ಕಾಲೇಜು ರಸ್ತೆ , ಚೆನ್ನಮ್ಮ ಸರ್ಕಲ್, ಸಿವಿಲ್ ಆಸ್ಪತ್ರೆ, ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜು ರಸ್ತೆ , ಲಿಂಗಾಯಿತ ಭವನ, ಶ್ರೀನಗರ ಗಾರ್ಡನ್, ರಾಣಿ ಚೆನ್ನಮ್ಮ ಸೊಸೈಟಿ, ಸಾಯಿ ಮಂದಿರ, ಬಾಲ ಭವನ, ಲೌಡೇಲ ಸ್ಕೂಲ್, ಮಹಾಂತೇಶ್ ನಗರ ಬಸ್ ನಿಲ್ದಾಣ, ಪಿ & ಟಿ  ಕ್ವಾಟರ್ಸ್, ಸಿದ್ನಾಳ ಕ್ರಾಸ್ , ಕೆಎಂಎಫ್ ಡೈರಿ, ದತ್ತ ಮಂದಿರ, ಲಿಂಗಾಯಿತ ಸಂಘಟನೆ ಮೈದಾನದವರೆಗೆ ಬಂದು ಫ.ಗು. ಹಳಕಟ್ಟಿ ಭವನದಲ್ಲಿ ಕೊನೆಗೊಳ್ಳಲಿದೆ ಈ ಬೃಹತ್ ರ್ಯಾಲಿಯಲ್ಲಿ ಸಮಸ್ತ ಜನರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿದರು.

Related Articles

Back to top button