Belagavi NewsBelgaum NewsKannada NewsKarnataka News

*ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಭಾರಿ ಗಾತ್ರದ ಲಾರಿ ಪಲ್ಟಿ: ಸಂಚಾರ ದಟ್ಟಣೆ *

ಪ್ರಗತಿವಾಹಿನಿ ಸುದ್ದಿ: ಚಚಡಿ ಗ್ರಾಮದ ಹತ್ತಿರದ ಬೆಳಗಾವಿ, ಬಾಗಲಕೋಟೆ ರಾಜ್ಯ ಹೆದ್ದಾರಿ ನಡುವೆ ಎಂಸ್ಯಾಂಡ್ ಮರಳು ತುಂಬಿದ್ದ ಭಾರಿ ಗಾತ್ರದ ಲಾರಿ ಪಲ್ಟಿಯಾಗಿ ಬಿದ್ದದ್ದನ್ನು ಕ್ರೇನ್ ಮೂಲಕ ತೆರುವುಗೊಳಿಸುವ ವೇಳೆ ಒಂದು ಗಂಟೆಗೂ ಹೆಚ್ಚು ಸಮಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆಯಿತು.

ಮರಳು ತುಂಬಿದ್ದ ಲಾರಿ ಬೆಳಗಾವಿ, ಬಾಗಲಕೋಟೆ ಹೆದ್ದಾರಿ ಮೂಲಕ ಬೆಳಗಾವಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವೆ ಮುಗುಚಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಮುರಗೋಡ ಠಾಣೆ ಪೊಲೀಸರು ಕ್ರೇನ್ ಮೂಲಕ ಲಾರಿಯನ್ನು ಎತ್ತಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಟ್ಟರು.

ಈ ಸಮಯದಲ್ಲಿ ನೂರಾರು ಸಂಖ್ಯೆಯಲ್ಲಿ ವಾಹನಗಳು ಸರದಿ ಸಾಲಿನಲ್ಲಿ ನಿಂತಿದ್ದವು. ಬಸ್, ಖಾಸಗಿ ವಾಹನಗಳ ಸವಾರರು, ಪ್ರಯಾಣಿಕರು ತೊಂದರೆ ಅನುಭವಿಸಿದರು. ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button