Karnataka NewsLatest

ಅಪಾರ ಜನಬೆಂಬಲವೇ ವಿಜಯಕ್ಕೆ ವರದಾನ: ಲಕ್ಷ್ಮೀ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಅವರು ಕುಮಾರಸ್ವಾಮಿ ಲೇಔಟ್, ಪೋಲಿಸ್ ಕಾಲೋನಿ, ಆಶ್ರಯ ಕಾಲೋನಿ ಹಾಗೂ ವಿವಿಧೆಡೆ ಪ್ರಚಾರ ಕೈಗೊಂಡು, ಜನರ ಬೆಂಬಲಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಳೆದ 5 ವರ್ಷಗಳ ಕಾಲ ಕ್ಷೇತ್ರಾದ್ಯಂತ ನೀವೆಲ್ಲರೂ ನನ್ನನ್ನು ಮನೆಯ ಮಗಳಂತೆ ಕಂಡಿದ್ದಿರಿ, ಪ್ರೀತಿ, ವಾತ್ಸಲ್ಯಗಳಿಂದ ಬರಮಾಡಿಕೊಂಡು, ಪ್ರತಿಯೊಂದು ಅಭಿವೃದ್ಧಿ ಕೆಲಸಗಳಲ್ಲಿ ಭಾಗಿಯಾಗಿ ನನ್ನನ್ನು ಹರಸಿ, ಆಶೀರ್ವದಿಸಿದ್ದಿರಿ. ನಿಮ್ಮ ಪ್ರೀತಿ, ಪ್ರೋತ್ಸಾಹಕ್ಕೆ ಬೆಲೆ ಕಟ್ಟಲಾಗದು” ಎಂದರು.

Home add -Advt

“ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು‌ ಕೈಗೊಳ್ಳಲು, ನಿಮ್ಮ ಆಶೀರ್ವಾದ ಅತ್ಯಗತ್ಯವಾಗಿದೆ. ಇನ್ನೆನು ಚುನಾವಣೆ ಹತ್ತಿರದಲ್ಲಿದೆ. ನಿಮ್ಮ ಬೆಂಬಲ ಯಾವತ್ತಿಗೂ ಕಾಂಗ್ರೆಸ್ ಪಕ್ಷದ ಮೇಲಿರಲಿ” ಎಂದು ವಿನಂತಿಸಿದರು.

ಸ್ಥಳೀಯ ಪ್ರಮುಖರು, ನಾಗರಿಕರು ಹಾಜರಿದ್ದರು.

https://pragati.taskdun.com/2nd-pu-resultannuncekarnataka/

https://pragati.taskdun.com/karnatakarainupdate-2/

https://pragati.taskdun.com/horrible-accident-near-khanapur-two-farmers-die/

Related Articles

Back to top button