Karnataka NewsLatest

*ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಪತಿ ಹಾಗೂ ಪತ್ನಿ ಇಬ್ಬರೂ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ನಡೆದಿದೆ.

ನಾಗೇಶ್ (56) ಹಾಗೂ ಪತ್ನಿ ಸತ್ಯಲಕ್ಷ್ಮೀ (46) ಆತ್ಮಹತ್ಯೆಗೆ ಶರಣಾದ ದಂಪತಿ. ಮೈಸೂರಿನಲ್ಲಿ ಕಳೆದ 6 ತಿಂಗಳಿಂದ ವಾಸವಾಗಿದ್ದ ದಂಪತಿ ನಿನ್ನೆ ಕೊಳ್ಳೆಗಾಲದ ಗುಡಿಬಂಡೆ ಬೀದಿಯ ತಮ್ಮ ಮನೆಗೆ ಬಂದಿದ್ದರು.

ಇಂದು ಬೆಳೆಗ್ಗೆ ನೋಡಿದರೆ ದಂಪತಿ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕೊಳ್ಳೆಗಾಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button